DRINKING WATER* ಬೆಂಗಳೂರು: ಮಾರ್ಚ್ ಮಾಹೆಯ ಆರಂಭದಲ್ಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ
Bangalore Reports Bangalore Reports
2.62K subscribers
50 views
0

 Published On Mar 8, 2024

DRINKING WATER*
ಬೆಂಗಳೂರು: ಮಾರ್ಚ್ ಮಾಹೆಯ ಆರಂಭದಲ್ಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೇಸಿಗೆ ಬಿರು ಬಿಸಿಲು ನೆತ್ತಿಯನ್ನು ಸುಡುತ್ತಿದೆ. ಕುಡಿಯುವ ನೀರಿಗಾಗಿ ನಾಡಿನೆಲ್ಲೆಡೆ ಜನ ಜಾನುವಾರು ಹಾಗೂ ಪಕ್ಷಿ ಸಂಕುಲ ಪರದಾಡುವಂತಾಗಿದೆ.
ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಬೆಂಗಳೂರಿನ ಭಾರತಿನಗರ ನಾಗರೀಕರ ವೇದಿಕೆ ಕಾಕ್ಸ್ ಟೌನ್ ನ ಡಾ.ರಾಜ್ ಕುಮಾರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ತಾರಾ ಅವರು ಸರ್ಕಾರ ಯುದ್ಧ ಕಾಲದಲ್ಲಿ ಶಸ್ತ್ರಭ್ಯಾಸ ಮಾಡುವ ಬದಲು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದರೆ ಕುಡಿಯುವ ನೀರಿಗಾಗಿ ಜನತೆ ಪರದಾಡುವ ಸ್ಥಿತಿ ಬರುತ್ತಿರಲಿಲ್ಲ ಎಂದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಅಧ್ಯಕ್ಷ ಎನ್.ಎಸ್.ರವಿ ಅವರು, ಬೇಸಿಗೆ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆ ಹರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಹಿಳೆಯರೂ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

show more

Share/Embed